ಜೆಡಿಎಸ್‌ನ ಭೋಜೇಗೌಡ ಅವರು ಕಾಂಗ್ರೆಸ್‌ ಮುಖಂಡ ಸತೀಶ್‌ ಅವರಿಗೆ ಸಿಹಿ ತಿನ್ನಿಸಿದ್ದಾರೆ.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.26 ಜೆಡಿಎಸ್‌ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಸ್‌.ಎಲ್‌. ಭೋಜೇಗೌಡ ಅವರು ಸಖರಾಯಪಟ್ಟಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಡಿಮನೆ ಸತೀಶ್‌ ಅವರಿಗೆ ಸಿಹಿ ತಿನ್ನಿಸಿದ ಫೋಟೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.

‘ಈ ಬಾರಿ ಕಾಂಗ್ರೆಸ್‌ಗೆ ವೋಟು ಹಾಕಿ’ ಎಂದು ಎಸ್‌.ಎಲ್‌. ಭೋಜೇಗೌಡ ಹೇಳಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿಯಬಿಟ್ಟ ಬೆನ್ನಲ್ಲೇ ಈ ಫೋಟೊ ಹರಿದಾಡುತ್ತಿರುವುದು ಚರ್ಚೆಗೆ ಗ್ರಾಸವಾಗಿದೆ.’ಮಹಡಿಮನೆ ಸತೀಶ್‌ ಮತ್ತು ನಾನು ಸ್ನೇಹಿತರು. ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾಗ ಕೇಕ್‌ ತಿನ್ನಿಸಿದ ಫೋಟೊವನ್ನು ಹರಿಯಬಿಟ್ಟಿದ್ದಾರೆ.

 

 

 

Scroll to Top