ಕಲ್ಲಡ್ಕ ಭಟ್ ವಿರುದ್ಧ ಸಚಿವರ ಹೇಳಿಕೆ ಸ್ವಾಗತಾರ್ಹ: ಕಡಬ ಬ್ಲಾಕ್ ಕಾಂಗ್ರೆಸ್

(ನ್ಯೂಸ್ ಕಡಬ) newskadaba.com ಕಡಬ, ಜೂ.19. ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಮತೀಯವಾದಿ ಶಕ್ತಿಗಳು ಧರ್ಮ ಧರ್ಮಗಳಲ್ಲಿ ಕಂದಕವನ್ನು ನಿರ್ಮಿಸಿ ಸಮಾಜಘಾತುಕ ಶಕ್ತಿಗಳು  ಕಾನೂನನ್ನು ಕೈಗೆತ್ತಿಕೊಂಡು ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸುತ್ತಿರುವ ಬಗ್ಗೆ ಕ್ರಮ ಕೈಗೊಳ್ಳಲು ದ.ಕ. ಜಿಲ್ಲಾ ಪೋಲಿಸ್ ಅಧಿಕಾರಿಯಾವರಿಗೆ ಸೂಚನೆ ನೀಡಿರುವುದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರ ಜವಾಬ್ದಾರಿಯುತ ಕೆಲಸವಾಗಿರುತ್ತದೆ. ಯಾವುದೇ ಮತೀಯವಾದಿ ಪಕ್ಷಗಳು ಗಲಭೆ ಅಶಾಂತಿಗೆ ಪ್ರಚೋದಿಸುವ ರೀತಿಯಲ್ಲಿ ಭಾಷಣದ ಮೂಲಕ ಹಾಗೂ ಮಾಧ್ಯಮಗಳ ಮೂಲಕ ಪ್ರೇರೆಪಿಸಿ ಕಾನೂನನ್ನು ಕೈಗೆತ್ತಿಕೊಳ್ಳುವ ಕ್ರಮಕ್ಕೆ ಒತ್ತು ನೀಡುವ ಕೆಲಸ ಯಾರೇ ಮಾಡಿದರೂ ಅವರ ವಿರುದ್ದ ಶಿಸ್ತು ಕ್ರಮ ಕೈಗೊಳ್ಳುವ ಬಗ್ಗೆ ಪೋಲಿಸ್ ಇಲಾಖೆಗೆ ನಿರ್ದೇಶನ ನೀಡಿರುವುದು ಸ್ವಾಗತಾರ್ಹ ವಿಚಾರವಾಗಿದೆ. ಇತ್ತೀಚಿಗೆ ಸಂಸದ ನಳಿನ್ ಕುಮಾರ್ ಕಟೀಲು ದ.ಕ.ಜಿಲ್ಲೆಗೆ ಬೆಂಕಿ ಇಡುವಂತೆ ಮತ್ತು ಕಲ್ಲಡ್ಕ ಪ್ರಭಾಕರ ಭಟ್ರನ್ನು ಬಂಧಿಸಿದರೆ ರಾಜ್ಯಕ್ಕೆ ಬೆಂಕಿ ಕೊಡುವ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷರಾದ ಸನ್ಮಾನ್ಯ ಯಡಿಯೂರಪ್ಪರವರು ಮಾತನಾಡಿರುವುದು ಸಮಂಜಸ ವಿಚಾರವೇ…? ಇಂತಹ ವಿಚಿದ್ರಕಾರಿ ಹೇಳಿಕೆಗಳನ್ನು ಕಡಬ ಬ್ಲಾಕ್ ಕಾಂಗ್ರೇಸ್ ಸಮಿತಿ ಖಂಡಿಸುತ್ತದೆ ಎಂದು ಬ್ಲಾಕ್ ಕಾಂಗ್ರೇಸ್ ಅಧ್ಯಕರಾದ ವಿಜಯ ಕುಮಾರ್ ರೈ ಕರ್ಮಾಯಿಯವರು ಪತ್ರಿಕಾ ಹೇಳಿಕೆ ನೀಡಿರುತ್ತಾರೆ.

error: Content is protected !!
Scroll to Top