ಲಕ್ಷ್ಮಣ ಸವದಿ ಆರೋಪಕ್ಕೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ..!

(ನ್ಯೂಸ್ ಕಡಬ)Newskadaba.com ಬೆಳಗಾವಿ,ಏ.27 ಯಾವ ನಿರ್ದಿಷ್ಟ ಪ್ರಕರಣದಲ್ಲಿ 40 ಪರ್ಸೆಂಟ್ ಹಣ ಪಡೆದಿದ್ದೇವೆ ಎಂದು ಸ್ಪಷ್ಟವಾಗಿ ಹೇಳಬೇಕು. ಈ ತರಹ ಗಾಳಿಯಲ್ಲಿ ಗುಂಡು ಹೊಡೆಯುವುದರಿಂದ ಪ್ರಯೋಜನ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ 40 ಪರ್ಸೆಂಟ್ ಕಮಿಷನ್ ತನಿಖೆ ಕೈಗೊಳ್ಳಲಾಗುವುದು ಎಂಬ ಲಕ್ಷ್ಮಣ ಸವದಿ ಅವರ ಹೇಳಿಕೆಗೆ ಅವರು  ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.ಸವದಿ ಬಿಜೆಪಿಯಲ್ಲಿ ಇದ್ದಾಗಲೇ ಹೇಳಬಹುದಿತ್ತಲ್ಲ, ಏಕೆ ಸುಮ್ಮನಿದ್ದರು? ಎಂದು ಲಕ್ಷ್ಮಣ ಸವದಿಗೆ ಸಿಎಂ ಬಸವರಾಜ ಬೊಮ್ಮಾಯಿ ಪ್ರಶ್ನೆ ಮಾಡಿದರು.

Also Read  ಬೆಂಗಳೂರು ಶೋಭಾ ಡೆವಲಪರ್ಸ್‌ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳ ದಾಳಿ

 

 

 

error: Content is protected !!
Scroll to Top