ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕದ್ದ ಪೊಲೀಸ್​ ಅಧಿಕಾರಿ.! ➤ಅಧಿಕಾರಿ ಶಾಶ್ವತವಾಗಿ ಕೆಲಸದಿಂದ ವಜಾ..!

(ನ್ಯೂಸ್ ಕಡಬ)Newskadaba.com ಕೊಟ್ಟಾಯಂ,ಏ.28 ಕೇರಳದ ಕಂಜಿರಪಲ್ಲಿಯ ಅಂಗಡಿಯೊಂದರಲ್ಲಿ ಮಾವಿನ ಹಣ್ಣುಗಳನ್ನು ಕಳ್ಳತನ ಮಾಡಿದ್ದ ಪೊಲೀಸ್​ ಅಧಿಕಾರಿಯನ್ನು ಶಾಶ್ವತವಾಗಿ ಕೆಲಸದಿಂದ ವಜಾಗೊಳಸಲಾಗಿದೆ. ಇಡುಕ್ಕಿ ಜಿಲ್ಲೆಯ ಪೊಲೀಸ್​ ಮುಖ್ಯಸ್ಥರು ಈ ಕ್ರಮವನ್ನು ತೆಗೆದುಕೊಂಡಿದ್ದಾರೆ.

ಶಿಹಾಬ್ ವಜಾಗೊಂಡ ಅಧಿಕಾರಿ. ಶಿಹಾಬ್​ ಇಡುಕ್ಕಿಯಲ್ಲಿರುವ ಎಆರ್​ ಕ್ಯಾಂಪ್​ನಲ್ಲಿ ಸಿವಿಲ್​ ಪೊಲೀಸ್​ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇಡುಕ್ಕಿಯ ಪೊಲೀಸ್​ ವರಿಷ್ಠಾಧಿಕಾರಿ ವಿ.ಯು. ಕುರೈಕೂಸ್​ ಅವರು ಸೇವೆಯಿಂದ ಯಾಕೆ ವಜಾ ಮಾಡಬಾರದು ಎಂಬುದಕ್ಕೆ ವಿವರಣೆ ನೀಡುವಂತೆ ಈ ಹಿಂದೆ ನೋಟಿಸ್​ನಲ್ಲಿ ತಿಳಿಸಿದ್ದರು. 

 

 

 

error: Content is protected !!

Join the Group

Join WhatsApp Group