ಡಿಕೆಶಿ ವಿರುದ್ಧ ಸ್ಪರ್ಧಿಸಿದ್ದ ಜೆಡಿಎಸ್ ಅಭ್ಯರ್ಥಿ ಕಾಂಗ್ರೆಸ್ ಗೆ ಸೇರ್ಪಡೆ ➤ ನಾರಾಯಣ ಗೌಡ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.28 ಕಳೆದ ಬಾರಿ (2018) ಕನಕಪುರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ವಿರುದ್ಧವೇ ಸ್ಪರ್ಧಿಸಿದ್ದ ನಾರಾಯಣಗೌಡ ಅವರು ಕಾಂಗ್ರೆಸ್ ಗೆ ಸೇರ್ಪಡೆಯಾದರು.ನಾರಾಯಣಗೌಡರ ಜೊತೆಗೆ ಬೆಂಗಳೂರು ದಕ್ಷಿಣ ಕ್ಷೇತ್ರದ ಜೆಡಿಎಸ್​ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ರೆಡ್ಡಿ ಅವರು ಸಹ ಕಾಂಗ್ರೆಸ್ ಸೇರಿದ್ದಾರೆ.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆಯಾದ ಇಬ್ಬರು ನಾಯಕರನ್ನು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್, ಸಂಸದ ಡಿ.ಕೆ ಸುರೇಶ್ ಅವರು ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

 

 

Scroll to Top