ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಭಾಸ್ಕರ್​ಗೆ ಇನ್ನೊಂದು ಗುಂಪು ಚಾಕುವಿನಿಂದ ಇರಿದಿದ್ದು, ವಿದ್ಯಾರ್ಥಿ ಭಾಸ್ಕರ್ ಜೆಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಬಾಗಲೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ.

Also Read  ‘ಗೃಹಲಕ್ಷ್ಮೀ’ ಅರ್ಜಿ ಸಲ್ಲಿಕೆಗೆ ಹಣ ಪಡೆದಲ್ಲಿ ಲೈಸೆನ್ಸ್ ರದ್ದು- ಸಚಿವ ಸಂತೋಷ್ ಲಾಡ್ ಎಚ್ಚರಿಕೆ

 

 

error: Content is protected !!
Scroll to Top