ಶ್ರದ್ಧಾವಾಕರ್ ಹತ್ಯೆ ಕೇಸ್ ➤ ನ್ಯಾಯಾಲಯ ಆದೇಶ ಪ್ರಕಟಿಸುವ ಸಾಧ್ಯತೆ

(ನ್ಯೂಸ್ ಕಡಬ)newskadaba.com ನವದೆಹಲಿ, ಏ.29. ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಹತ್ಯೆ ಪ್ರಕರಣದ ತೀರ್ಪನ್ನು ಇಂದು ಸಾಕೇತ್ ನ್ಯಾಯಾಲಯ ತನ್ನ ಆದೇಶವನ್ನು ಪ್ರಕಟಿಸುವ ಸಾಧ್ಯತೆಯಿದೆ.


ಏ.15ರಂದು ಪ್ರಮುಖ ಆರೋಪಿ ಅಫ್ತಾಬ್ ಪೂನಾವಾಲಾ ವಿರುದ್ಧ ಆರೋಪಗಳ ಕುರಿತು ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಈ ನಡುವೆ ಮಗಳ ಮೃತದೇಹ ಅವಶೇಷವನ್ನು ಶ್ರದ್ಧಾ ತಂದೆ ವಿಕಾಸ್‌ಗೆ ಹಸ್ತಾಂತರಿಸುವ ಕುರಿತು ದಿಲ್ಲಿ ಪೊಲೀಸರು ಕೋರ್ಟ್‌ಗೆ ಉತ್ತರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನ ಶ್ರದ್ಧಾ ಅವರ ತಂದೆ, ಮಗಳ ಅಂತಿಮ ಸಂಸ್ಕಾರಕ್ಕಾಗಿ ಶವ ನೀಡುವಂತೆ ಮನವಿ ಮಾಡಿದ್ದರು.

Scroll to Top