‘ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ’.!   ➤ ಕಾಂಗ್ರೇಸ್ ಗೆ ಸೆಡ್ಡು ಹೊಡೆದ ಶೋಭಾ ಕರಂದ್ಲಾಜೆ  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.02 ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಹೊರ ತಂದಿರುವ ಪ್ರಣಾಳಿಕೆಯಲ್ಲಿ ಬಜರಂಗದಳ ನಿಷೇಧ ಭರವಸೆ ನೀಡಿರುವುದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾ ಮಂಡಲವಾಗಿದ್ದಾರೆ. ಈ ಭರವಸೆ ಓದಿ ನನ್ನ ರಕ್ತ ಕುದಿಯುತ್ತಿದೆ. ನಾನೂ ಬಜರಂಗದಳ ಕಾರ್ಯಕರ್ತೆ ತಾಕತ್ತಿದ್ದರೆ ನನ್ನನ್ನು ಬಂಧಿಸಿ ಎಂದು ಸೆಡ್ಡು ಹೊಡೆದರು.

ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಸುದ್ದಿಗೋಷ್ಠಿ‌ಯಲ್ಲಿ ಮಾತನಾಡಿದ ಅವರು, ದೇಶದ್ರೋಹಿ ಪಿಎಫ್ ಐ ಸಂಘಟನೆಯನ್ನು ದೇಶಭಕ್ತ ಬಜರಂಗದಳಕ್ಕೆ ಹೋಲಿಸಿರುವುದು ಸರಿಯಲ್ಲ. ಉಗ್ರ ಕೃತ್ಯ ಎಸಗುವವರು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರಿಗೆ ಸೋದರರಾಗಿದ್ದು, ದೇಶದ ಹಿಂದು ಯುವಜನರಲ್ಲಿ ಜಾಗೃತಿ ಕೆಲಸ ಮಾಡುತ್ತಿರುಚ ಬಜರಂಗದಳ ವಿರೋಧಿ ಎನಿಸಿದೆ ಎಂದು ಚಾಟಿ ಬೀಸಿದರು.

 

 

error: Content is protected !!

Join the Group

Join WhatsApp Group