ಟಾರ್ಗೆಟ್ ಗ್ರೂಪ್‌ನ ಇಲ್ಯಾಸ್ ಹತ್ಯೆ ಪ್ರಕರಣ ► ಆರೋಪಿಗಳ ಸುಳಿವು ಲಭ್ಯ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.14. ಟಾರ್ಗೆಟ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಕುಡ್ಪಾಡಿಯ ಇಲ್ಯಾಸ್ ಹತ್ಯೆಯ ಆರೋಪಿಗಳ ಸುಳಿವು ಲಭ್ಯವಾಗಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವುದಾಗಿ ನಗರ ಪೊಲೀಸ್ ಆಯುಕ್ತ ಟಿ.ಆರ್.ಸುರೇಶ್ ತಿಳಿಸಿದ್ದಾರೆ.

ಎರಡು ಗುಂಪುಗಳಾಗಿ ವಿಭಾಗಿಸಲ್ಪಟ್ಟ ಟಾರ್ಗೆಟ್ ಗ್ರೂಪ್‌ನ ಒಂದು ಬಣದಿಂದ ದ್ವೇಷದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರುವ ಬಗ್ಗೆ ಶಂಕೆ ಇದ್ದು, ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದರು. ಇಲ್ಯಾಸ್ ಟಾರ್ಗೆಟ್ ಗ್ರೂಪ್‌ನಲ್ಲಿ ಗುರುತಿಸಿಕೊಂಡಿದ್ದ. ಬಳಿಕ ಈ ಗ್ರೂಪ್‌ ದಾವೂದ್ ಹಾಗೂ ಸಫ್ವಾನ್ ಎಂಬ ಗುಂಪು ಪ್ರತ್ಯೇಕಗೊಂಡು ಈತನ ಮೇಲೆ ದ್ವೇಷ ಸಾಧಿಸುತ್ತಿತ್ತು. ಈ ದ್ವೇಷದಿಂದ ಇಲ್ಯಾಸ್‌ನ ಹತ್ಯೆ ನಡೆದಿದೆ ಎಂದು ಅವರು ವಿವರಿಸಿದರು. ಇಲ್ಯಾಸ್‌ನ ಮೇಲೆ ಹಲವು ಪ್ರಕರಣಗಳು ದಾಖಲಾಗಿದ್ದು, ಇತ್ತೀಚೆಗಷ್ಟೇ ಜೈಲ್ ನಿಂದ ಬಿಡುಗಡೆಗೊಂಡಿದ್ದ ಎಂದವರು ಹೇಳಿದರು.

error: Content is protected !!
Scroll to Top