ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ..!​ ➤  ಕುಸ್ತಿಪಟುಗಳು ಆರೋಪ

(ನ್ಯೂಸ್ ಕಡಬ)Newskadaba.com ದೆಹಲಿ,ಮೇ..03 ಲೈಂಗಿಕ ಕಿರುಕುಳ ಆರೋಪದ ಮೇಲೆ ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ (WFI) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಮಹಿಳಾ ಕುಸ್ತಿಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆ ಬ್ರಿಜ್ ಭೂಷಣ್ ಶರಣ್ ಸಿಂಗ್ ಪ್ರಕರಣವನ್ನು ಮುಚ್ಚಿ ಹಾಕಲು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರಯತ್ನಿಸಿದ್ದಾರೆ ಎಂದು ಮಹಿಳಾ ಕುಸ್ತಿಪಟುಗಳು ಆರೋಪಿಸಿದ್ದಾರೆ.

ಶಕ್ತಿಯುತ ವ್ಯಕ್ತಿಯ ವಿರುದ್ಧ ನಿಲ್ಲುವುದು ತುಂಬಾ ಕಷ್ಟ, ವಿಶೇಷವಾಗಿ ದೀರ್ಘಕಾಲ ಆ ಸ್ಥಾನದಲ್ಲಿದ್ದು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವವರ ವಿರುದ್ಧ ನಿಲ್ಲುವುದು ತುಂಬಾ ಕಷ್ಟ ಎಂದು ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರು ಹೇಳಿದ್ದಾರೆ.ದೆಹಲಿಯ ಜಂತರ್ ಮಂತರ್ ನಲ್ಲಿ ಶರಣ್ ಸಿಂಗ್ ವಿರುದ್ಧ ಕುಸ್ತಿಪಟು ಬ್ರಿಜ್ ಭೂಷಣ್ ಕೂಡ ಪ್ರತಿಭಟನೆ ನಡೆಸುತ್ತಿದ್ದಾರೆ.

Also Read  ನಾಪತ್ತೆಯಾಗಿದ್ದ ಮಹಿಳೆ ಮೃತದೇಹ ಪತ್ತೆ…!      ➤  ಪತಿಯ ಆತ್ಮಹತ್ಯೆ ಪ್ರಕರಣಕ್ಕೆ ತಿರುವು

ಈ ಕುಸ್ತಿಪಟುಗಳು ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸುತ್ತಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ವಿನೇಶ್ ಫೋಗಟ್, ಪ್ರತಿಭಟನೆ ಪ್ರಾರಂಭಿಸುವ ಮೊದಲು ನಾವು ಅಧಿಕಾರಿಯನ್ನು ಭೇಟಿ ಮಾಡಿದ್ದೇವೆ. ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ, ನಂತರ ನಾವು ಧರಣಿ ಕುಳಿತಿದ್ದೇವೆ ಎಂದು ಹೇಳಿದ್ದಾರೆ.

 

 

error: Content is protected !!
Scroll to Top