JDS ಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜನೆ ಮಾಡುತ್ತೇನೆ.. !‌ ➤ಎಚ್.ಡಿ ಕುಮಾರಸ್ವಾಮಿ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ವಿಧಾನಸಭಾ ಚುನಾವಣೆಯಲ್ಲಿ ಗೆಲುವಿಗಾಗಿ ಭರ್ಜರಿ ತಯಾರಿ ನಡೆಸಿರುವ ಜಾತ್ಯಾತೀತ ಜನತಾದಳ, ಚುನಾವಣಾ ದಿನಾಂಕ ಘೋಷಣೆಗೂ ಮುನ್ನವೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು. ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಾಜ್ಯದಾದ್ಯಂತ ಪಂಚರತ್ನ ರಥ ಯಾತ್ರೆ ನಡೆದಿದ್ದು, ಬಹುಮತ ಸಿಗುವ ವಿಶ್ವಾಸ ಹೊಂದಿದ್ದಾರೆ.

ಇದರ ಮಧ್ಯೆ ಉತ್ತರ ಕನ್ನಡ ಜಿಲ್ಲೆ ಹಳಿಯಾಳದಲ್ಲಿ ಜೆಡಿಎಸ್ ಅಭ್ಯರ್ಥಿ ಎಸ್.ಎಲ್. ಘೋಟ್ನೆಕರ್ ಪರ ಪ್ರಚಾರ ನಡೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಈ ಬಾರಿ ಸರ್ಕಾರ ರಚಿಸಲು ನಮಗೆ ಬಹುಮತ ಸಿಗದಿದ್ದರೆ ಪಕ್ಷವನ್ನೇ ವಿಸರ್ಜಿಸುವುದಾಗಿ ಮಹತ್ವದ ಹೇಳಿಕೆ ನೀಡಿದ್ದಾರೆ.

Also Read  ಮೃಗಾಲಯದಲ್ಲಿದ್ದ 6 ತಿಂಗಳ ಆನೆ ಮರಿ ಅನಾರೋಗ್ಯದಿಂದ ಸಾವು

 

 

error: Content is protected !!
Scroll to Top