ಮಂಗಳೂರು: ಮೇ. 4ರಿಂದ ರೇಷನಿಂಗ್ ಮೂಲಕ ನೀರು ಸರಬರಾಜು

(ನ್ಯೂಸ್ ಕಡಬ) newskadaba.com. ಮಂಗಳೂರು, ಮೇ 04. ನೇತ್ರಾವತಿ ನದಿಯ ನೀರಿನ ಒಳಹರಿವು ಈಗಾಗಲೇ ನಿಂತಿರುವುದರಿಂದ ಮತ್ತು ಬೇಸಿಗೆ ಬಿರು ಬಿಸಿಲಿನಿಂದಾಗಿ ನಗರಪಾಲಿಕೆಯ ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಮಟ್ಟ ತೀವ್ರವಾಗಿ ಕುಸಿಯುತ್ತಿದ್ದು, ಸಾರ್ವಜನಿಕರಿಗೆ ಈ ಬೇಸಿಗೆಯ ಅಂತ್ಯದವರೆಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆಯಾಗದಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಾಳೆಯಿಂದ ರೇಷನಿಂಗ್ ಮೂಲಕ ನೀರು ಸರಬರಾಜು ಮಾಡುವುದು ಅನಿವಾರ್ಯವಾಗಿದೆ ಎಂದು ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ತಿಳಿಸಿದ್ದಾರೆ.

 

error: Content is protected !!
Scroll to Top