ಬೆಳ್ತಂಗಡಿ: ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡಿದ ಕೈ ಅಭ್ಯರ್ಥಿ ರಕ್ಷಿತ್ ಶಿವರಾಂ

(ನ್ಯೂಸ್ ಕಡಬ) newskadaba.com. ಬೆಳ್ತಂಗಡಿ, ಮೇ 04. ಚುನಾವಣೆಗೆ ಇನ್ನು ಕೇವಲ 6 ದಿನಗಳಷ್ಟೇ ಬಾಕಿ ಇದೆ. ಮತದಾರರ ಮನಗೆಲ್ಲಲು ಅಭ್ಯರ್ಥಿಗಳು ಭರ್ಜರಿಯಾಗಿ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ಬೆಳ್ತಂಗಡಿ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಕಾರ್ಯಕರ್ತರಲ್ಲಿ ಸ್ಪೂರ್ತಿ ತುಂಬಲು ವಿಭಿನ್ನ ಶೈಲಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ನನ್ನ ಬೂತ್ ನನ್ನ ಹೊಣೆ” ಎಂದು ಕಾರ್ಯಕರ್ತರಿಗೆ ಹೊಸ ಜವಾಬ್ದಾರಿ ಮೂಲಕ ಪ್ರಚಾರಮಾಡಲು ತಯಾರಿ ಮಾಡಿಕೊಂಡಿದ್ದು, ಈ ವಿನೂತನ ಶೈಲಿಯ ಪ್ರಚಾರಕ್ಕೆ ಮಾಜಿ ಶಾಸಕ ವಸಂತ ಬಂಗೇರ ಚಾಲನೆ ನೀಡಿದ್ದಾರೆ. ಈ ವೇಳೆ ಬೂತ್ ಮಟ್ಟದಲ್ಲಿ ನಾಳೆ ಪ್ರಚಾರ ನಡೆಸಲು ಕಾರ್ಯಕರ್ತರಿಗೆ ಮಾಜಿ ಶಾಸಕರು ಕರೆ ನೀಡಿದ್ದಾರೆ.

ಪ್ರತಿಯೊಬ್ಬ ಕಾರ್ಯಕರ್ತರು ನಾಳೆ ತಮ್ಮ ಬೂತ್ ಗಳಲ್ಲಿ ಮನೆ ಮನೆ ಪ್ರಚಾರ ಮಾಡಲು ಪ್ಲಾನ್ ಮಾಡಿಕೊಂಡಿದ್ದು ಈ ಮೂಲಕ ಬಿಜೆಪಿಯ ತಂತ್ರಕ್ಕೆ ಠಕ್ಕರ್ ನೀಡುತ್ತಿದ್ದಾರೆ.”ನನ್ನ ಬೂತ್ ನನ್ನ ಹೊಣೆ” ಕಾರ್ಯಕ್ರಮಕ್ಕೆ ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದ್ದು, “ಕಾರ್ಯಕರ್ತರೇ ಕಾಂಗ್ರೆಸ್ ಪಕ್ಷಕ್ಕೆ ಜೀವಾಳ” ಎಂದು ರಕ್ಷಿತ್ ಶಿವರಾಂ ಕಾರ್ಯಕರ್ತರಲ್ಲಿ ಹುಮ್ಮಸ್ಸು ತುಂಬುತ್ತಿದ್ದಾರೆ.

error: Content is protected !!

Join the Group

Join WhatsApp Group