ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯವಿಲ್ಲ ಎಂದ ಮಾಜಿ ಸಿಎಂ…!➤ಬಿ.ಎಸ್‌.ಯಡಿಯೂರಪ್ಪ

(ನ್ಯೂಸ್ ಕಡಬ)Newskadaba.com ಬೆಂಗಳೂರು,ಮೇ.04 ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ನಾನು ಮತ್ತು ಬಿ.ಎಲ್‌. ಸಂತೋಷ್‌ ಒಂದೇ ತಾಯಿಯ ಮಕ್ಕಳಂತಿದ್ದೇವೆ. ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬುದೇ ಎಲ್ಲರ ಉದ್ದೇಶ. ಹಳೆ ಮೈಸೂರು ಭಾಗದಲ್ಲಿ ಯಾರೂ ನಿರೀಕ್ಷಿಸದಷ್ಟು ಪ್ರಮಾಣದಲ್ಲಿ ಬಿಜೆಪಿ ಬಲ ವೃದ್ಧಿಸಿಕೊಂಡಿದೆ ಎಂದರು.

ವರುಣಾದಲ್ಲಿ ಸಿದ್ದರಾಮಯ್ಯ ಸೋತರೂ ಆಶ್ಚರ್ಯ ವಿಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ “ಉದಯವಾಣಿ”ಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಕ್ಷದಲ್ಲಿ ನಾವೆಲ್ಲರೂ ಒಂದೇ. ಎಲ್ಲರಿಗೂ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕೆಂಬ ಉದ್ದೇಶ ಮಾತ್ರ ಇರುವಂಥದ್ದು. ನನ್ನ ಮತ್ತು ಸಂತೋಷ್‌ ನಡುವೆ ಯಾವುದೇ ಭೇದಭಾವ ಇಲ್ಲ. ನಾವು ಸಹೋದರರಂತೆ ಎಂದರು.

 

 

 

Scroll to Top