ಬಂಟ್ವಾಳ ಚುನಾವಣಾ ಪ್ರಚಾರ ➤ಕುಸಿದು ಬಿದ್ದು ಕಾರ್ಯಕರ್ತ ಮೃತ್ಯು

(ನ್ಯೂಸ್ ಕಡಬ) newskadaba.com. ಬಂಟ್ವಾಳ, ಮೇ 05. ಬಿಜೆಪಿ ಪಕ್ಷದ  ಅಭ್ಯರ್ಥಿ ಪರವಾಗಿ ಚುನಾವಣಾ ಪ್ರಚಾರ ನಡೆಸುತ್ತಿದ್ದ ವೇಳೆ ಕಾರ್ಯಕರ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಸಮೀಪದ ಕಾವಳಮೂಡೂರುನಲ್ಲಿ ನಡೆದಿದೆ. ಪ್ರವೀಣ್ ಚಂದ್ರ ನಾಯಕ್ (45) ಮೃತಪಟ್ಟವರು.

ವೃತ್ತಿಯಲ್ಲಿ ಛಾಯಾಗ್ರಾಹಕನಾಗಿದ್ದು, ಕೃಷಿಕನಾಗಿರುವ ಪ್ರವೀಣ್ ರವರು ಚುನಾವಣಾ ಪ್ರಚಾರದ ವೇಳೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!

Join the Group

Join WhatsApp Group