ಈ ಬಾರಿ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಎಂಟು ಕ್ಷೇತ್ರಗಳೂ ಕಾಂಗ್ರೆಸ್ ಪಾಲಾಗುವುದು ಖಚಿತ.! ➤ ಫಾರೂಕ್ ಉಳ್ಳಾಲ್

(ನ್ಯೂಸ್ ಕಡಬ)Newskadaba.com ಮಂಗಳೂರು,ಮೇ.08 ಅಗತ್ಯ ವಸ್ತುಗಳ ಬೆಲೆಯೇರಿಕೆ ಮತ್ತು ಭ್ರಷ್ಟಾಚಾರವನ್ನು ಮೂಲದೇಯ್ಯವನ್ನಾಗಿ ರಾಜ್ಯದ ಬೊಕ್ಕಸ ಬರಿದಾಗಿಸಿರುವ ಬಿಜೆಪಿ ಸರಕಾರದ ವಿರುದ್ಧ ಜನಾಕ್ರೋಶ ದ.ಕ. ಜಿಲ್ಲೆಯ ಉದ್ದಗಲಕ್ಕೂ ಎದ್ದು ಕಾಣುತ್ತಿವೆ. ಆದ್ದರಿಂದ ಈ ಬಾರಿ ಚುನಾವಣೆಯಲ್ಲಿ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ‌.

ಉಳ್ಳಾಲದಲ್ಲಂತೂ ಯು.ಟಿ.ಖಾದರ್ ಅಭೂತಪೂರ್ವ ದಾಖಲೆಯೊಂದಿಗೆ ಗೆದ್ದು ಬರಲಿದ್ದಾರೆ ಎಂದು ಕೆ.ಪಿ.ಸಿ.ಸಿ ಸಂಯೋಜಕ ಹಾಗೂ ರಾಜ್ಯ ಕಾಂಗ್ರೆಸ್ ಪಕ್ಷದ ಪ್ರಚಾರ ಸಮಿತಿಯ ಉಸ್ತುವಾರಿ ಫಾರೂಕ್ ಉಳ್ಳಾಲ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

.

 

Scroll to Top