ಬೈಕ್​ ಗೆ KSRTC ಬಸ್ ಢಿಕ್ಕಿ ➤ ಸ್ಥಳದಲ್ಲೇ ನವವಿವಾಹಿತೆ ಮೃತ್ಯು

(ನ್ಯೂಸ್ ಕಡಬ)newskadaba.com ಮೈಸೂರು, ಮೇ.08. ಬೈಕ್​ಗೆ ಕೆಎಸ್​ಆರ್​ಟಿಸಿ ಬಸ್ ಢಿಕ್ಕಿ ಹೊಡೆದ ಪರಿಣಾಮ ನವ ವಿವಾಹಿತೆ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕಿನ ಹಾಡ್ಯ ಗ್ರಾಮದ ಬಳಿ ನಡೆದಿದೆ.

ಹಲ್ಲರೆ ಗ್ರಾಮದ ಪೂಜಾ(19) ಮೃತ ದುರ್ದೈವಿಯಾಗಿದ್ದಾರೆ. ಪತಿ ಮದನ್ ಗಂಭೀರವಾಗಿ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಡಿಯಾಲ ಗ್ರಾಮದಿಂದ ಸಾರಿಗೆ ಬಸ್ ನಂಜನಗೂಡು ಕಡೆಗೆ ಬರುತ್ತಿದ್ದ ವೇಳೆ ಬೈಕ್ ​ನಲ್ಲಿ ನವದಂಪತಿಗಳು ತೆರಳುತ್ತಿದ್ದಾಗ ಈ ಸಂಭವಿಸಿದೆ.

 

Scroll to Top