ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆ➤ನಟ ಜಗ್ಗೇಶ್ ವಿರುದ್ಧ ಪ್ರಕರಣ ದಾಖಲು 

(ನ್ಯೂಸ್ ಕಡಬ)Newskadaba.com ತುಮಕೂರು,ಮೇ.08 ದ್ವೇಷ ಭಾಷಣ ಮಾಡಿದ ಆರೋಪದ ಹಿನ್ನೆಲೆ ಕನ್ನಡದ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ವಿರುದ್ಧ ಪ್ರಕರಣ ದಾಖಲಾಗಿದೆ.ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಇತ್ತೀಚೆಗೆ ನಡೆದ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ನಟ ಜಗ್ಗೇಶ್ ಹೇಳಿಕೆ ನೀಡಿ ನೀತಿ ಸಂಹಿತೆ ಉಲ್ಲಂಘಿಸಿದ್ದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಯಾವೊಬ್ಬ ಹಿಂದುವಿಗೂ ಕೂಡ ಉಳಿಗಾಲ ಇಲ್ಲ ಎಂದು ನಟ ಜಗ್ಗೇಶ್ ಹೇಳಿದ್ದರು. ಈ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

 

 

Scroll to Top