ದೀಪಕ್ ರಾವ್ ಕೊಲೆ ಪ್ರಕರಣ ► ಇನ್ನಿಬ್ಬರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜ.15. ಇತ್ತೀಚೆಗೆ ಹಾಡುಹಗಲೇ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮತ್ತಿಬ್ಬರು ಆರೋಪಿಗಳನ್ನು ಸೋಮವಾರದಂದು ಬಂಧಿಸಿದ್ದ ಬಂಧಿತರ ಸಂಖ್ಯೆ ಆರಕ್ಕೇರಿದೆ.

ಬಂಧಿತ ಆರೋಪಿಗಳನ್ನು ಕಾಟಿಪಳ್ಳ 2 ನೇ ಬ್ಲಾಕ್ ನಿವಾಸಿ ಅಬ್ದುಲ್ ಅಝೀಝ್(42) ಮತ್ತು ಮೂಲತಃ ಕಾಟಿಪಳ್ಳ 2ನೆ ಬ್ಲಾಕ್‌ನ ನಿವಾಸಿ ಪ್ರಸ್ತುತ ಕೃಷ್ಣಾಪುರದಲ್ಲಿ ವಾಸವಾಗಿರುವ ಅಬ್ದುಲ್ ಅಝೀಮ್ (34) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಈ ಮೊದಲು ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು. ಪಣಂಬೂರು ಪೊಲೀಸ್ ಠಾಣಾ ನಿರೀಕ್ಷಕ ರಫೀಕ್ ಮತ್ತು ಸಿಬ್ಬಂದಿ ಹಾಗೂ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶಾಂತರಾಂ ಕುಂದರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also Read  ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಅರ್ಜಿ ಆಹ್ವಾನ

error: Content is protected !!
Scroll to Top