(ನ್ಯೂಸ್ ಕಡಬ)newskadaba.com ಮಂಗಳೂರು, ಮೇ.12. ಕದ್ರಿ ದೇವಸ್ಥಾನದ ಆವರಣದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮೂವರು ಯುವಕರನ್ನು ಸ್ಥಳೀಯರು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ದೇವಸ್ಥಾನದ ಆವರಣದಲ್ಲಿ ಅಪರಿಚಿತರು ಓಡಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ದೇವಸ್ಥಾನಕ್ಕೆ ಭೇಟಿ ನೀಡಿದ ಅವರನ್ನು ವಿಚಾರಿಸಿದ್ದಾರೆ. ಯುವಕರು ದೇವಸ್ಥಾನದ ಅಂಗಣಕ್ಕೆ ಬೈಕ್ ತಂದಿದ್ದಲ್ಲದೇ ಚಪ್ಪಲಿ ಧರಿಸಿ ಅಡ್ಡಾಡುತ್ತಿದ್ದದ್ದು ಭಕ್ತರ ಅಕ್ರೋಶಕ್ಕೆ ಕಾರಣವಾಗಿತ್ತು. ಯುವಕರನ್ನು ವಿಚಾರಿಸಿದಾಗ ತಾವು ಅಸೈಗೋಳಿಯಿಂದ ಕಾಟಿಪಳ್ಳಕ್ಕೆ ಹೋಗುವವರಾಗಿದ್ದು, ತಪ್ಪಾಗಿ ಗೂಗಲ್ ಮ್ಯಾಪ್ ನೋಡಿಕೊಂಡು ಹೋಗುವಾಗ ದಾರಿ ತಪ್ಪಿ ಇಲ್ಲಿಗೆ ಬಂದಿರುವುದಾಗಿ ತಿಳಿಸಿದ್ದಾರೆ. ದೇವಸ್ಥಾನದ ಆವರಣವನ್ನು ಪ್ರವೇಶಿಸಿದ ಬಗ್ಗೆ ತಿಳಿಸುವಂತೆ ಪದೇ ಪದೇ ಕೇಳಿದಾಗ, ಅವರಿಂದ ಸೂಕ್ತ ಉತ್ತರ ನೀಡದಿದ್ದಾಗ ಪೊಲೀಸರಿಗೆ ಸ್ಥಳೀಯರು ಒಪ್ಪಿಸಿದರು.
