ಅಪ್ರಾಪ್ತೆ ಪ್ರೇಯಸಿಯ ಮೇಲೆ ಮಚ್ಚು ಬೀಸಿದ ಯುವಕ.! ➤ತಾನೂ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)Newskadaba.com ತುಮಕೂರು,ಮೇ.12 ಪ್ರೀತಿಯಲ್ಲಿ ಬಿರುಕು ಮೂಡಿದ ಕಾರಣ ಪ್ರೇಯಸಿಯ ಮೇಲೆ ಮಚ್ಚಿನಿಂದ ದಾಳಿ ನಡೆಸಿ ಯುವಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿ ಹುಳಿಯಾರು ಪ್ರದೇಶ ಯಳನಾಡು ಗ್ರಾಮದಲ್ಲಿ ನಡೆದಿದೆ.26 ವರ್ಷದ ಬಿಎಸ್ ವಿನಯಕುಮಾರ್ ಆತ್ಮಹತ್ಯೆಗೆ ಶರಣಾದ ಯುವಕ.

ಮೃತ ವಿನಯಕುಮಾರ್ ಅದೇ ಗ್ರಾಮದ ಕಲ್ಲೇಗೌಡರ ಪುತ್ರಿ 17 ವರ್ಷದ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದನು. ಅಪ್ರಾಪ್ತೆ ದೊಡ್ಡಬಿದರೆ ಗ್ರಾಮದ ನಿವಾಸಿಯಾಗಿದ್ದು, ತಾಯಿ ಜೊತೆ ಭಟ್ಟರಹಳ್ಳಿಯ ಅಜ್ಜಿ ಮನೆಯಲ್ಲಿ ವಾಸವಾಗಿದ್ದಳು. ದ್ವಿತೀಯ ಪಿಯುಸಿ ಉತ್ತೀರ್ಣಳಾಗಿದ್ದ ಅಪ್ರಾಪ್ತೆಗೆ ವಿನಯಕುಮಾರ್ ಮೇಲೆ ಪ್ರೇಮಾಂಕುರವಾಗಿತ್ತು.

ಪ್ರೇಯಸಿ ತನ್ನಿಂದ ಅಂತರ ಕಾಯ್ದುಕೊಂಡಿದ್ದ ಕೋಪಗೊಂಡಿದ್ದ ವಿನಯಕುಮಾರ್ ಬೆಳಗಿನ ಜಾವ ಆಕೆಯ ಮನೆಗೆ ನುಗ್ಗಿದ್ದಾನೆ. ಮಚ್ಚಿನಿಂದ ಪ್ರೇಯಸಿ ಮೇಲೆ ಮಾರಣಾಂತಿಕ ದಾಳಿ ನಡೆಸಿ ಅಲ್ಲಿಂದ ಎಸ್ಕೇಪ್ ಆಗಿದ್ದಾನೆ. ಗಾಯಗೊಂಡಿರುವ ಅಪ್ರಾಪ್ತೆ ಹಾಸನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.

Also Read  ಅಕ್ರಮ ಸಂಬಂಧ ಕೊಲೆಯಲ್ಲಿ ಅಂತ್ಯ ► ಮಚ್ಚಿನಿಂದ ಹೊಡೆದು ಮಹಿಳೆಯ ಕೊಲೆ

 

error: Content is protected !!
Scroll to Top