ಆಯತಪ್ಪಿ ಬಾವಿಗೆ ಬಿದ್ದ ಮಹಿಳೆ.!➤ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ)Newskadaba.com ಕಾರ್ಕಳ,ಮೇ.12 ಆಯತಪ್ಪಿ ಬಾವಿಗೆ ಬಿದ್ದ ಮಹಿಳೆಯನ್ನು ಕಾರ್ಕಳ ಅಗ್ನಿಶಾಮಕ ದಳದ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ ಘಟನೆ ಉಡುಪಿ ಜಿಲ್ಲೆಯ ಕಾಕರ್ಳದಲ್ಲಿ ನಡೆದಿದೆ. ಕಾರ್ಕಳ ತಾಲೂಕು ಕಚೇರಿ ಸಮೀಪದ ಬಂಗ್ಲೆಗುಡ್ಡೆ ಕೆಎಂಇಎಸ್ ಶಾಲೆ ಎದುರಿನ ನಿವಾಸಿ 33 ವರ್ಷದ ನಸೀಬಾ ಬಾನು ಬಾವಿಗೆ ರಕ್ಷಣೆಗೆ ಒಳಪಟ್ಟ ಮಹಿಳೆಯಾಗಿದ್ದಾರೆ.

ಇವರು ತಮ್ಮ ಮನೆಯ ಪಕ್ಕದ ಬಾವಿಗೆ ಬಳಿ ತೆರಳಿದಾಗ ಆಯತಪ್ಪಿ ಬಾವಿಗೆ ಬಿದಿದ್ದು ಅವರ ಗಂಡ ಹುಸೇನ್ ಎಂಬವರು ಅಗ್ನಿಶಾಮಕ ದಳಕ್ಕೆ ಕರೆ ಮಾಡಿ ತಿಳಿಸಿದ್ದರು.ತಕ್ಷಣವೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಮಹಿಳೆಯನ್ನು ರಕ್ಷಿಸಿದ್ದಾರೆ. ಬಾವಿಗೆ ಬಿದ್ದ ನಸೀಬಾ ಬಾನು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

Also Read  ಬೆಳ್ತಂಗಡಿ: ಅರಣ್ಯಾಧಿಕಾರಿಗಳ ಮಿಂಚಿನ ಕಾರ್ಯಾಚರಣೆ ➤ ನಾಲ್ವರು ಮರಗಳ್ಳರ ಬಂಧನ

 

 

error: Content is protected !!
Scroll to Top