ಬಾವಿಗೆ ಇಳಿದವನ ರಕ್ಷಣೆಗೆ ಮುಂದಾದ ಇಬ್ಬರು ಸೇರಿ ಮೂವರೂ ಮೃತ್ಯು

(ನ್ಯೂಸ್ ಕಡಬ)newskadaba.com ಕಾರವಾರ, ಮೇ.12. ಬಾವಿಗೆ ಬಿದ್ದಿದ್ದ ಪಂಪ್ ಎತ್ತಲು ಇಳಿದ ವ್ಯಕ್ತಿ ಹಿಂತಿರುಗಿ ಬಾರದ ಹಿನ್ನೆಲೆ ರಕ್ಷಣೆಗೆ ಮುಂದಾದ ಇಬ್ಬರು ಸೇರಿ ಒಟ್ಟು ಮೂವರು ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನ ಕಟ್ಟ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಗೋವಿಂದ ಸೋಮಯ್ಯ ಪೂಜಾರಿ, ಗಣೇಶ್ ರಾಮದಾಸ್ ಶೇಟ್, ಸುರೇಶ್ ನಾಯರ್ ಬಾವಿಗೆ ಬಿದ್ದು ಮರಣ ಹೊಂದಿದವರು ಎಂಬುದು ತಿಳಿದುಬಂದಿದೆ. ಬಾವಿಯಲ್ಲಿ ಬಿದ್ದಿದ್ದ ನೀರೆತ್ತುವ ಪಂಪ್ ಸೆಟ್ ತೆಗೆಯಲು ಬಾವಿಗೆ ಇಳಿದಿದ್ದ ವ್ಯಕ್ತಿ ಮೇಲಕ್ಕೆ ಬಾರದ ಹಿನ್ನೆಲೆ ಇಬ್ಬರು ರಕ್ಷಣೆಗೆ ಮುಂದಾಗಿದ್ದರು. ಆದರೆ ಮೂವರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಸ್ಥಳಕ್ಕೆ ಯಲ್ಲಾಪುರ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಆಲಂಕಾರು ಮೂರ್ತೆದಾರರ ಸಹಕಾರಿ ಸಂಘದಲ್ಲಿ ಇ-ಸ್ಟಾಂಪಿಂಗ್ ಉದ್ಘಾಟನೆ

 

error: Content is protected !!
Scroll to Top