ಮಂಗಳೂರು: ‘ಕಾಂಗ್ರೆಸ್ ಗೆ ಸ್ಪಷ್ಟ ಜನಾದೇಶ ‘ ➤ ಸತತ ಐದನೇ ಬಾರಿ ಗೆದ್ದ ಯು.ಟಿ ಖಾದರ್

(ನ್ಯೂಸ್ ಕಡಬ)Newskadaba.com ಮಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆ ಮಂಗಳೂರು- ಉಳ್ಳಾಲ ಕ್ಷೇತ್ರದ ಹಾಲಿ ಶಾಸಕ, ಕಾಂಗ್ರೆಸ್ ಅಭ್ಯರ್ಥಿ ಯು.ಟಿ ಖಾದರ್ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿಯ ಅಭ್ಯರ್ಥಿ ಸತೀಶ್ ಕುಂಪಲ ಅವರನ್ನು ಬೃಹತ್ ಮತಗಳಿಂದ ಮಣಿಸಿದ್ದು ಈ ಮೂಲಕ ಉಳ್ಳಾಲ ಪ್ರತಿನಿಧಿಸುವ ಐದನೇ ಅವಧಿಯ ಶಾಸಕರಾಗಿ ಆಯ್ಕೆಯಾಗಿದ್ದಾರೆ.


ಮುಸ್ಲಿಂ ಮತದಾರರೇ ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಯು.ಟಿ.ಖಾದರ್ ಸುಲಭವಾಗಿ ಗೆಲುವು ಸಾಧಿಸಿದ್ದಾರೆ. 2018 ರ ರಾಜ್ಯ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಗೆದ್ದ ಏಕೈಕ ಕಾಂಗ್ರೆಸ್ ಶಾಸಕರಾಗಿದ್ದರು.

error: Content is protected !!

Join the Group

Join WhatsApp Group