ಕರ್ನಾಟಕದಲ್ಲಿ ಮುದುಡಿದ ಕಮಲ  ➤ ದಕ್ಷಿಣ ಭಾರತ ಬಿಜೆಪಿ ಮುಕ್ತ !

(ನ್ಯೂಸ್ ಕಡಬ)Newskadaba.com ಬೆಂಗಳೂರು, ಮೇ.13. 2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಕ್ಷ ಸೋತಿದೆ. ದಕ್ಷಿಣ ಭಾರತದ ಐದು ರಾಜ್ಯಗಳಲ್ಲಿ ಕರ್ನಾಟಕದಲ್ಲಿ ಇದ್ದ ಬಿಜೆಪಿ ಆಡಳಿತ ಇಂದಿಗೆ ಕೈತಪ್ಪಿ ಹೋಗಿದೆ.

ದಕ್ಷಿಣ ಭಾರತದಲ್ಲಿ ಬಿಜೆಪಿ ಸ್ವಂತ ಬಲದಿಂದ ಸರ್ಕಾರ ರಚಿಸುವ ಏಕೈಕ ರಾಜ್ಯ ಕರ್ನಾಟಕವಾಗಿತ್ತು. ಕೇಂದ್ರಾಡಳಿತ ಪ್ರದೇಶವಾದ ಪುದುಚೆರಿಯಲ್ಲಿ ಬಿಜೆಪಿಯನ್ನು ಒಳಗೊಂಡ ಮೈತ್ರಿಕೂಟ ಅಧಿಕಾರದಲ್ಲಿದೆ. ಸಾಮಾನ್ಯವಾಗಿ ಬಿಜೆಪಿ ಪ್ರಬಲ ಚುನಾವಣಾ ತಂತ್ರ, ಪಕ್ಷದ ಶ್ರೀಮಂತ ಖಜಾನೆ ಮತ್ತು ಪ್ರಧಾನ ಮಂತ್ರಿ ಮೋದಿಯವರ ಸಮರ್ಪಿತ ಅನುಯಾಯಿಗಳಿಂದ ಬೆಂಬಲಿತ ಪಕ್ಷವಾಗಿದ್ದರೂ ಕರ್ನಾಟಕದಲ್ಲಿ ಈ ಬಾರಿ ಅಧಿಕಾರ ಹಿಡಿಯುವಲ್ಲಿ ವಿಫಲವಾಗಿದೆ.

 

error: Content is protected !!

Join the Group

Join WhatsApp Group