ಬೆಳ್ತಂಗಡಿ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ➤  ಉದ್ಯಮಿ ವಿರುದ್ದ ದೂರು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.15. ಕೆಲಸ ಕೊಡಿಸುವ ನೆಪದಲ್ಲಿ ವಿವಾಹಿತ ಮಹಿಳೆಯನ್ನು ಕಿಡ್ನಾಪ್ ಮಾಡಿ ಹಾಗೂ ಕಾರಿನಲ್ಲೇ ಲೈಂಗಿಕ ಕಿರುಕುಳ ನೀಡಿದಂತ ಆರೋಪದ ಉದ್ಯಮಿಯೋರ್ವನ ವಿರುದ್ದ ದೂರು ದಾಖಲಾಗಿದೆ.

ಸಂತ್ರಸ್ತೆ ನೀಡಿದಂತ ದೂರಿನ ಮೇಲೆ, ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ದ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ಮಹಿಳೆ ಪತಿಯ ಜೊತೆಗೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ, ಉದ್ಯಮಿ ಪ್ರಭಾಕರ ಹೆಗ್ಡೆ ವಿರುದ್ಧ ದೂರು ದಾಖಲಿಸಿದ್ದಾರೆ.

Also Read  ಡಿಜಿಟಲ್ ಮಾದರಿಯ ಜಾಹೀರಾತು ಫಲಕ ಅಳವಡಿಕೆ ➤ಸಾರ್ವಜನಿಕರಲ್ಲಿ ಮನವಿ

 

error: Content is protected !!
Scroll to Top