ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ..!➤ಶಾಸಕ ಪ್ರದೀಪ್ ಈಶ್ವರ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಮೇ.15 ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಸಂಬಂಧಿಸಿದಂತೆ ಎಐಸಿಸಿ ನಿಯೋಜಿಸಿದ ಮೂವರು ವೀಕ್ಷಕರು ಪಕ್ಷದ ಶಾಸಕರಿಂದ ಲಿಖಿತ ಅಭಿಪ್ರಾಯ ಸಂಗ್ರಹಿಸಿದ್ದಾರೆ.ಈ ಕುರಿತು ಶಾಸಕಾಂಗ ಪಕ್ಷದ ಸಭೆ ಬಳಿಕ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಚಿಕ್ಕಬಳ್ಳಾಪುರದ ನೂತನ ಶಾಸಕ ಪ್ರದೀಪ್ ಈಶ್ವರ್, ಸಿದ್ದರಾಮಯ್ಯ ಮತ್ತು ಡಿಕೆಶಿ ನನ್ನ ಎರಡು ಕಣ್ಣುಗಳಿದ್ದ ಹಾಗೆ.

ನನಗೆ  ಇಬ್ಬರೂ ಕೂಡಬೇಕು. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು.’ಶಾಸಕರು ಚೀಟಿಯಲ್ಲಿ ಸಿಎಂ ಯಾರಾಗಬೇಕೆಂದು ಗುಪ್ತ ಮತದಾನ ಮಾಡಿದ್ದಾರೆ. ಎಲ್ಲ ಶಾಸಕರೂ ತಮ್ಮ ಅಭಿಪ್ರಾಯಗಳನ್ನು ತಿಳಿಸಿದ್ದಾರೆ’ ಎಂದರು ಹೇಳಿದರು.

 

 

 

Scroll to Top