ವಿಟ್ಲ: ಹಲ್ಲೆ ಆರೋಪ, ದೂರು, ಪ್ರತಿದೂರು ದಾಖಲು

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.16. ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ವ್ಯಕ್ತಿಯೋರ್ವ ಗ್ರಾಹಕ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದು, ಗ್ರಾಹಕ ಸಿಸಿಟಿವಿ ವೀಡಿಯೊ ಸಹಿತ ದೂರು ದಾರನ ವಿರುದ್ಧವೇ ವಿಟ್ಲ ಠಾಣೆಗೆ ಪ್ರತಿದೂರು ದಾಖಲಿಸಿದ್ದಾರೆ.


ಮೇಗಿನಪೇಟೆಯಲ್ಲಿ ಗ್ಯಾಸ್ ಏಜೆನ್ಸಿಯಲ್ಲಿ ಕೆಲಸ ನಿರ್ವಹಿಸುವ ಸದಾನಂದ ಅವರು ಮೊದಲು ಪೊಲೀಸರಿಗೆ ದೂರು ನೀಡಿದ್ದಾರೆ. ಕಮರ್ಷಿಯಲ್ ಗ್ಯಾಸ್ ನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೊನ್ನೆ ಯಾಕೆ ಗ್ಯಾಸ್ ಹಾಕಿಲ್ಲವೆಂದು ಗಲಾಟೆ ನಡೆಸಿ ಹಲ್ಲೆ ನಡೆಸಿರುವುದಾಗಿ ದೂರು ನೀಡಿದ್ದಾರೆ.

Also Read  ʻಬುಕ್‌ ಬ್ರಹ್ಮ ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ 2023 ಮತ್ತು ಕಾದಂಬರಿ ಪುರಸ್ಕಾರ 2023ʼ  ರೂ. 2 ಲಕ್ಷ 69 ಸಾವಿರ ಬಹುಮಾನ !

error: Content is protected !!
Scroll to Top