ಕಾಂಗ್ರೆಸ್ ಹಿರಿಯ ಮುಖಂಡ  ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಣೆ.!➤ ರಮಾನಾಥ ರೈ

(ನ್ಯೂಸ್ ಕಡಬ)newskadaba.com ಮಂಗಳೂರು,ಮೇ.17 ಚುನಾವಣಾ ರಾಜಕೀಯದಿಂದ ನಿವೃತ್ತಗೊಳ್ಳುತ್ತಿರುವುದಾಗಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷದ ರಾಜಕೀಯದಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ ಇನ್ನು ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಅವರು ಘೋಷಿಸಿದ್ದಾರೆ.ಮಂಗಳೂರು ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ಪ್ರಕಟಿಸಿದ್ದಾರೆ.

ಕಾಂಗ್ರೆಸ್ ಪಕ್ಷದ ಅಭೂತಪೂರ್ವ ಗೆಲುವಿಗೆ ಶ್ರಮಿಸಿದ ರಾಜ್ಯದ ಜನತೆಗೆ ಹಾಗೂ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಮತ ಚಲಾಯಿಸಿದ ಮತದಾರರಿಗೆ ರಮಾನಾಥ ರೈ ಕೃತಜ್ಞತೆ ಸಲ್ಲಿಸುವುದಾಗಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಗೆ ಹಿನ್ನಡೆಯಾಗಿದ್ದರೂ ರಾಜ್ಯದಲ್ಲಿ ಪಕ್ಷ ಜಯ ಗಳಿಸಿರುವುದರಿಂದ ಪಕ್ಷದ ಬೆಂಬಲಿಗರು ಎದೆಗುಂದದೆ ಕಾರ್ಯನಿರ್ವಹಿಬೇಕು ಎಂದು ಕರೆ ನೀಡಿದ್ದಾರೆ.

Also Read  ಇತಿಹಾಸ ಬರೆದ ಬಿಜೆಪಿ: 10 ಕೋಟಿಗೇರಿದ ಪಕ್ಷದ ಸದಸ್ಯತ್ವ

 

 

 

error: Content is protected !!
Scroll to Top