ಅಧಿಕಾರ ಹಂಚಿಕೆ ಸೂತ್ರಕ್ಕೆ ಒಪ್ಪಿದ ಸಿದ್ಧು, ಡಿಕೆಶಿ ➤ 30-30 ತಿಂಗಳು ಸಿಎಂ ಪಟ್ಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.18. ಕರ್ನಾಟಕ ಸಿಎಂ ಆಯ್ಕೆ ಅಂತಿಮ ಹಂತಕ್ಕೆ ಬಂದು ನಿಂತಿದೆ. ಕರ್ನಾಟಕದ ಮುಖ್ಯಮಂತ್ರಿಯಾಗಿ 2ನೇ ಬಾರಿಗೆ ಸಿದ್ಧರಾಮಯ್ಯ ಆಯ್ಕೆಯಾಗಿದ್ದರೆ, ಡಿಕೆ ಶಿವಕುಮಾರ್ ಗೆ ಉಪ ಮುಖ್ಯಮಂತ್ರಿ ಪಟ್ಟ ದೊರೆತಿದೆ. ಈ ಆಯ್ಕೆ ನಡೆದಿರೋದು ಅಧಿಕಾರ ಹಂಚಿಕೆ ಸೂತ್ರದಿಂದ ಎಂದು ಹೇಳಲಾಗುತ್ತಿದೆ.


ಕಾಂಗ್ರೆಸ್ ಪಕ್ಷದಕ್ಕೆ ಸ್ಪಷ್ಟ ಬಹುಮತ ವಿಧಾನಸಭಾ ಚುನಾವಣೆಯಲ್ಲಿ ಬಂದು ಐದು ದಿನಗಳ ನಂತ್ರ, ಇಂದು ಕರ್ನಾಟಕ ಸಿಎಂ ಆಯ್ಕೆ ಫೈನಲ್ ಆಗಿದೆ ಎಂದು ಹೇಳಲಾಗುತ್ತಿದೆ. ಕೆಲ ದಿನಗಳಿಂದ ಸಿಎಂ ಹುದ್ದೆಗಾಗಿ ನಡೆಯುತ್ತಿದ್ದಂತ ಗದ್ದುಗೆ ಗುದ್ದಾಟಕ್ಕೆ ಹೈಕಮಾಂಡ್ ಕೊನೆಗೂ ಅಧಿಕಾರ ಹಂಚಿಕೆ ಸೂತ್ರದ ಮೂಲಕ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.

error: Content is protected !!
Scroll to Top