ಕಂಠೀರವ ಸ್ಟೇಡಿಯಂ ಬಳಿ ನೂಕುನುಗ್ಗಲು, ಲಘು ಲಾಠಿ ಚಾರ್ಚ್​​

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮೊದಲ ಬಾರಿಗೆ ಉಪಮುಖ್ಯಮಂತ್ರಿಯಾಗಿ , 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12.30 ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಸಮಾರಂಭಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನರು ಆಗಮಿಸುತ್ತಿದ್ದು, ಕಂಠೀರವ ಕ್ರೀಡಾಂಗಣದ ಪ್ರವೇಶ ದ್ವಾರದ ಬೆಳಗ್ಗೆಯೇ ನೂಕುನುಗ್ಗಲು ಉಂಟಾಗಿದ್ದು, ಜನರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

Also Read  ಕಡಬ: ಗೃಹರಕ್ಷಕರ ಚುನಾವಣಾ ಪೂರ್ವ ಸಿದ್ಧತಾ ಸಭೆ

 

error: Content is protected !!
Scroll to Top