ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜು.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.20 ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಹೊಸ ಸರ್ಕಾರ ಸ್ವಾಗತಿಸಲು ಶಕ್ತಿ ಕೇಂದ್ರ ವಿಧಾನಸೌಧ ಸಜ್ಜಾಗುತ್ತಿದೆ. ಮುಖ್ಯಮಂತ್ರಿ-ಉಪ ಮುಖ್ಯಮಂತ್ರಿ ಸಹಿತ ಹಲವು ಸಚಿವರು ಪ್ರಮಾಣ ಸ್ವೀಕರಿಸುತ್ತಿದ್ದು, ವಿಧಾನಸೌಧದ ಸಂಪುಟ ಸಭೆ ಸಭಾಂಗಣ, ಮುಖ್ಯಮಂತ್ರಿ ಕಚೇರಿ, ಸಮ್ಮೇಳನ ಸಭಾಂಗಣ ಸ್ವತ್ಛಗೊಳಿಸಿ ಹೂವುಗಳಿಂದ ಆಲಂಕಾರ ಮಾಡಲಾಗಿದೆ.

ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿ ನಂತರ ಸಂಪುಟ ಸಭಾಂಗಣ, ಮುಖ್ಯಮಂತ್ರಿ ಹಾಗೂ ಸಚಿವರ ಕೊಠಡಿಗಳಿಗೆ ಬೀಗ ಹಾಕಲಾಗಿತ್ತು. ಇದೀಗ ಬೀಗ ತೆರೆದು ಸ್ವತ್ಛಗೊಳಿಸಲಾಗಿದೆ.

Also Read  ರಾಜ್ಯದಲ್ಲಿ ಮತ್ತೆ 18 ಮಂದಿಗೆ ಕೊರೋನ ಸೋಂಕು ದೃಢ: 400ರ ಗಟಿ ದಾಟಿದ ಸೋಂಕಿತರ ಸಂಖ್ಯೆ

 

 

error: Content is protected !!
Scroll to Top