4 ರಾಜ್ಯಗಳ ಚುನಾವಣೆ; ಕಾಂಗ್ರೆಸ್‌ ಮಹತ್ವದ ಸಭೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ.20. ಕರ್ನಾಟಕವನ್ನು ಗೆದ್ದ ಜೋಶ್‌ ನಲ್ಲಿರುವ ಕಾಂಗ್ರೆಸ್‌ ಇದೀಗ ಮಧ್ಯಪ್ರವೇಶ, ರಾಜಸ್ಥಾನ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ ವಿಧಾನಸಭೆ ಚುನಾವಣೆಯತ್ತ ಗಮನಹರಿಸಿದೆ. ಈ ನಾಲ್ಕು ರಾಜ್ಯಗಳಲ್ಲಿ ಪ್ರಾಬಲ್ಯ ಮೆರೆದರೆ ಆ ಬಳಿಕ ಎದುರಾಗುವ ಲೋಕಸಭಾ ಚುನಾವಣೆಗೆ ಪ್ರಬಲ ವೇದಿಕೆ ಈ ಮೂಲಕ ಸಜ್ಜಗೊಳಿಸಲು ಕಾಂಗ್ರೆಸ್ ಮುಂದಾಗಿದೆ.

ಈ ರಾಜ್ಯಗಳ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲು ಮೇ 24ರಂದು ಈ ರಾಜ್ಯದ ನಾಯಕರ ಸಭೆ ಕರೆದಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಈ ಸಭೆಯ ಸಾರಥ್ಯ ವಹಿಸಲಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.

error: Content is protected !!

Join the Group

Join WhatsApp Group