ವರುಣಾರ್ಭಟಕ್ಕೆ ನಟ ಜಗ್ಗೇಶ್ ಕಾರು ಮುಳುಗಡೆ.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.22  ರಾಜಧಾನಿ ಬೆಂಗಳೂರಿನಲ್ಲಿ ಸುರಿದ ರಣಮಳೆಗೆ ಹಲವೆಡೆ ಅವಾಂತರಗಳು ಸೃಷ್ಟಿಯಾಗಿದ್ದು, ಹಿರಿಯ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಕಾರು ಕೂಡ ನೀರಿನಲ್ಲಿ ಮುಳುಗಡೆಯಾಗಿದೆ.ಜಗ್ಗೇಶ್ ಅವರ ಬಿಎಂಡಬ್ಲ್ಯೂ ಕಾರು ನೀರಿನಲ್ಲಿ ಮುಳುಗಿದೆ.

ರಿಪೇರಿ ಕಾರ್ಯ ಹಿನ್ನೆಲೆಯಲ್ಲಿ ಸ್ನೇಹಿತನ ಮನೆಯಲ್ಲಿ ಕಾರನ್ನು ನಿಲ್ಲಿಸಿದ್ದರು. ಸ್ನೇಹಿತ ಮುರುಳಿಯವರ ಮಲ್ಲೇಶ್ವರಂ ಮನೆಯ ಸೆಲ್ ನಲ್ಲಿ ಕಾರನ್ನು ನಿಲ್ಲಿಸಲಾಗಿತ್ತು. ಆದರೆ ಭಾರಿ ಮಳೆಯಿಂದಾಗಿ ಕಾರು ಮುಳುಗಡೆಯಾಗಿದೆ.

 

 

Scroll to Top