ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಮೃತ್ಯು➤BBMP ಅಧಿಕಾರಿಗಳ ವಿರುದ್ಧ ದೂರು ದಾಖಲು.!

(ನ್ಯೂಸ್ ಕಡಬ)newskadaba.com ಹಲಸೂರು,ಮೇ.22 ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ಮಳೆ ನೀರಿಗೆ ಇನ್ಫೋಸಿಸ್ ಉದ್ಯೋಗಿ ಭಾನುರೇಖಾ ಮೃತಪಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ವಿರುದ್ಧ ದೂರು ದಾಖಲಾಗಿದೆ.

ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ದೂರು ದಾಖಲಾಗಿದೆ, ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಂಡರ್‌ಪಾಸ್‌ನಲ್ಲಿ ನೀರು ನಿಂತಿದೆ, ನೀರು ಹೊರಹೋಗಲು ಜಾಗ ಇಲ್ಲದಂತಾಗಿತ್ತು.ನೀರು ಹೋಗಲು ಜಾಗ ಇದ್ದಿದ್ದರೆ ಈ ಅವಘಡ ಸಂಭವಿಸುತ್ತಿರಲಿಲ್ಲ ಎಂದು ಭಾನು ಸಹೋದರ ಸಂದೀಪ್ ದೂರು ನೀಡಿದ್ದಾರೆ.

error: Content is protected !!
Scroll to Top