ಕ್ಷುಲ್ಲಕ ಕಾರಣಕ್ಕಾಗಿ ಬಾಲಕರನ್ನು ಥಳಿಸಿ ಹೊಂಡಕ್ಕೆ ಎಸೆದ ವ್ಯಕ್ತಿ➤ಆರೋಪಿ ಪರಾರಿ

(ನ್ಯೂಸ್ ಕಡಬ)newskadaba.com ಪಾಟ್ನಾ,ಮೇ.22  ಕ್ಷುಲ್ಲಕ ಕಾರಣಕ್ಕಾಗಿ 12 ವರ್ಷದ ಬಾಲಕನನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿರುವ ಘಟನೆ ಬಿಹಾರದ ಪಾಟ್ನಾ ಸಮೀಪದ ನಡೆದಿದೆ. ದೀಪಕ್​ ಹಾಗೂ ಆತನ ಸ್ನೇಹಿತರು ಸಾಯಂಕಾಲ ಬಯಲಿನಲ್ಲಿ ಆಟವಾಡುತ್ತಿದ್ದ ವೇಳೆ, ಅಲ್ಲಿಯೇ ಸಮೀಪದ ಮನೆಯೊಂದರ ಮರದಲ್ಲಿ ಲೀಚಿ ಹಣ್ಣು ನೋಡಿ ಕೂಡಲೇ ಮರವನ್ನು ಏರಲು ಯತ್ನಿಸಿದ್ದಾರೆ. ಮನೆಯ ಮಾಲೀಕ ಈ ಹುಡುಗರನ್ನು ದಾರುಣವಾಗಿ ಥಳಿಸಿ ನೀರಿನ ಹೊಂಡಕ್ಕೆ ಎಸೆದಿದ್ದಾನೆ.

ಭೀಕರವಾಗಿ ಗಾಯಗೊಂಡಿದ್ದ ಬಾಲಕರಿಬ್ಬರನ್ನು ಸಮೀಪದ ಆಸ್ಪತ್ರೆಗೆ ಸೇರಿಸಲಾಯಿತು.ನಂತರ ದೀಪಕ್​ ಎಂಬ ಬಾಲಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾನೆ.ಮನೆ ಮಾಲೀಕ ಬೈತಾ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಸದ್ಯ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

 

error: Content is protected !!

Join the Group

Join WhatsApp Group