ಪುತ್ತೂರು: ಕಾಲೇಜು ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಮೇ.22. ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ.

ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು ಬಂದು ಮನೆಯ ಸಮೀಪದ ಗುಡ್ಡದಲ್ಲಿ ಹೋಗಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ರಿತೇಶ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ‌.

Also Read  ಪುತ್ತೂರು, ಕಡಬದಲ್ಲಿ ಇಂದು 7 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

 

error: Content is protected !!
Scroll to Top