ರೈಲಿನ ಇಂಜಿನ್ ಕಳಚಿ ಬೇರ್ಪಟ್ಟ ಬೋಗಿಗಳು.!➤ಮಾರ್ಗ ಮಧ್ಯೆ ಪ್ರಯಾಣಿಕರ ಪರದಾಟ

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಮೇ.26  ತಾಳಗುಪ್ಪಾ- ಬೆಂಗಳೂರು ಎಕ್ಸಪ್ರೆಸ್ ರೈಲು ಭದ್ರಾವತಿ ಸಮೀಪ ಇಂಜಿನ್ ಕಳಚಿ ಬೋಗಿಗಳ ಬಿಟ್ಟು ಮುಂದೆ ಹೋಗಿರುವ ಘಟನೆ ನಡೆದಿದೆ. ಬೋಗಿಗಳು ಮಾರ್ಗ ಮಧ್ಯೆದಲ್ಲಿಯೇ ಬೇರ್ಪಟ್ಟ ಕಾರಣ ಪ್ರಯಾಣಿಕರು ಪರದಾಡುತ್ತಿದ್ದಾರೆ.

ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಹೊರಟ ರೈಲು ಬೆಳಗ್ಗೆ 7 ಗಂಟೆಗೆ ಬಿದರೆ ಬಳಿ ಬರುತ್ತಿದ್ದಂತೆ ಇಂಜಿನ್​ನಿಂದ ಬೋಗಿಗಳು ಬೇರ್ಪಟ್ಟಿವೆ. ಕಪ್ಲಿಂಗ್ ಸಡಿಲಗೊಂಡ ಹಿನ್ನೆಲೆ ಬೋಗಿಗಳಿಂದ ಇಂಜಿನ್ ಬೇರ್ಪಟ್ಟಿದೆ ಎಂದು ತಿಳಿದು ಬಂದಿದೆ.ಬಿದರೆ ಪ್ರದೇಶ ಸಮತಟ್ಟಾಗಿದ್ದರಿಂದ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Also Read  ಐಷಾರಾಮಿ ಪ್ರದೇಶಗಳನ್ನು ಗುರಿಯಾಗಿಸಿ ಖತರ್ನಾಕ್ ಗ್ಯಾಂಗ್ ದರೋಡೆ..!     ಆರೋಪಿಗಳು ಅರೆಸ್ಟ್..!

 

 

error: Content is protected !!
Scroll to Top