ಅಶ್ವತ್ಥನಾರಾಯಣ, ಹರೀಶ್ ಪೂಂಜಾ ವಿರುದ್ಧ ಕ್ರಮ ➤ ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಮೇ, 26. ಸಿಎನ್ ಅಶ್ವತ್ಥನಾರಾಯಣ, ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಮಾಧ್ಯಮಗಳ ಜೊತೆ ಅವರು ಮಾತನಾಡುತ್ತಿದ್ದರು. ಈಗಾಗಲೇ ಮೈಸೂರಿನಲ್ಲಿ ಮಾಜಿ ಸಚಿವ ಅಶ್ವಥ್ ನಾರಾಯಣ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಸೇರಿದಂತೆ ಒಟ್ಟು ಮೂರು ಕೇಸ್ ಆಗಿದೆ, ಈ ಬಗ್ಗೆ ಏನು ಹೇಳುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಈ ಬಗ್ಗೆ ಕ್ರಮ ಆಗುತ್ತೆ. ಮುಂದೆ ಎಲ್ಲವೂ ಕೆಲಸ ಅಗುತ್ತೆ ಎಂದು ಹೇಳಿದರು.

Also Read  ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ    ➤  ತರಬೇತಿ ಆರಂಭ !

 

error: Content is protected !!
Scroll to Top