ಕೈ ತಪ್ಪಿದ ಸಚಿವ ಸ್ಥಾನ➤ ರಾಜೀನಾಮೆ ನೀಡಲು ಮುಂದಾದ ಬಿ.ಕೆ ಹರಿಪ್ರಸಾದ್.!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.27ಸಿದ್ದರಾಮಯ್ಯ ಸರ್ಕಾರದ ಸಂಪುಟ ಸೇರ್ಪಡೆಗೆ ಬಾರೀ ಲಾಬಿ ಏರ್ಪಟ್ಟಿದ್ದು, ಕೊನೆಗೂ 24 ಜನರ ಶಾಸಕರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕರಾಗಿದ್ದ ಬಿ.ಕೆ ಹರಿಪ್ರಸಾದ್ ಸಚಿವ ಸ್ಥಾನ ಕೈ ತಪ್ಪಿದ್ದು, ರಾಜೀನಾಮೆಗೆ ಮುಂದಾಗಿದ್ದಾರೆ ಎನ್ನಲಾಗಿದೆ.

ಹಲವು ರಾಜ್ಯಗಳ ಕಾಂಗ್ರೆಸ್ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಹೈಕಮಾಂಡ್ ಮಟ್ಟದಲ್ಲೂ ಉತ್ತಮ‌ ಬಾಂಧವ್ಯ ಹೊಂದಿದ್ದ ಬಿ ಕೆ ಹರಿಪ್ರಸಾದ್‌ ಅವರಿಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇಟ್ಟುಕೊಂಡಿದ್ದು, ಇದೀಗ ಸಚಿವ ಸ್ಥಾನ ಕೈ ತಪ್ಪಿದ್ದು, ಅಸಮಾಧಾನಗೊಂಡಿದ್ದಾರೆ ಎನ್ನಲಾಗಿದೆ.

Also Read  'ಮೋದಿಯನ್ನು ಟೀಕಿಸಿದವರು ಯಾರೂ ಉದ್ಧಾರವಾಗಿಲ್ಲ'       ➤ ಖರ್ಗೆಗೆ ಈಶ್ವರಪ್ಪ ತಿರುಗೇಟು

error: Content is protected !!
Scroll to Top