ಉಳ್ಳಾಲ: ಕಾರು ಮತ್ತು ಬೈಕ್ ನಡುವೆ ಅಪಘಾತ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ)newskadaba.com ಉಳ್ಳಾಲ, ಮೇ.27. ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರರಿಬ್ಬರು ಗಾಯಗೊಂಡಿರುವ ಘಟನೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಉಳ್ಳಾಲದ ಮಾಸ್ತಿಕಟ್ಟೆ ಬಳಿ ಸಂಭವಿಸಿದೆ ಎಂದು ವರದಿ ತಿಳಿಸಿದೆ.


ತೊಕ್ಕೊಟ್ಟು ಕಡೆಯಿಂದ ಬರುತ್ತಿದ್ದ ಕಾರು ಎಡಬದಿಗೆ ತಿರುಗಿಸುವ ಸಂದರ್ಭ ಅದೇ ದಾರಿಯಲ್ಲಿ ಅಮಿತ ವೇಗದಲ್ಲಿ ಬಮನದಿರುವ ಬೈಕ್ ಕಾರಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಲ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಾಯಾಳುಗಳಿಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಅಜ್ಜಾವರ ಗ್ರಾಮದಲ್ಲಿ ಲಾಭದಾಯಕ ಮೀನು ಕೃಷಿ ತರಬೇತಿ ಕಾರ್ಯಕ್ರಮ

error: Content is protected !!
Scroll to Top