ಬಡವರಿಗೆ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ.!➤ಸಚಿವ ಕೆ.ಎನ್. ರಾಜಣ್ಣ ಹೇಳಿಕೆ

(ನ್ಯೂಸ್ ಕಡಬ)newskadaba.com ಬೆಂಗಳೂರು ,ಮೇ.29 ನಾಡಿನ ಬಡ ಜನತೆಗೆ ನ್ಯಾಯಯುತವಾಗಿ ಸಿಗಬೇಕಾದ ಸವಲತ್ತುಗಳನ್ನು ಉಳ್ಳವರು ಪಡೆದರೆ ಅದು ಹೆಣದ ಮೇಲಿನ ಅನ್ನ ತಿಂದಂತೆ ಎಂದು ನೂತನ ಸಚಿವ ಕೆ.ಎನ್. ರಾಜಣ್ಣ ಅಭಿಪ್ರಾಯಪಟ್ಟಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ, ಭರವಸೆ ನೀಡಿದಂತೆ ಐದು ಗ್ಯಾರಂಟಿಗಳನ್ನು ಜಾರಿಗೆ ತಂದೇ ತರುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದ ಅವರು, ಪ್ರತಿಪಕ್ಷಗಳು ಮುಗ್ಧ ಜನರನ್ನು ಎತ್ತಿ ಕಟ್ಟುವ ಕೆಲಸ ಮಾಡಬಾರದು ಎಂದು ಹೇಳಿದರು.

 

Also Read  7ನೇ ವೇತನ ಮಧ್ಯಂತರ ವರದಿ ಪಡೆದು ವೇತನ ಮತ್ತು ಭತ್ಯೆಗಳ ಪರಿಷ್ಕರಣೆ     ➤  ಇಂದು ಸಿಎಂ ಬೊಮ್ಮಾಯಿ ಘೋಷಣೆ

error: Content is protected !!
Scroll to Top