ಸುಳ್ಯ: ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಢಿಕ್ಕಿ ➤ ಮೂವರು ಗಂಭೀರ

(ನ್ಯೂಸ್ ಕಡಬ)newskadaba.com  ಸುಳ್ಯ, ಮೇ.29. ಬೈಕ್ ವೊಂದು ಪಾದಚಾರಿಗೆ ಢಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ.

ಮಂಡೆಕೋಲು ಗ್ರಾಮದ ಭವಾನಿಶಂಕರ್, ಪತ್ನಿ ಲೀಲಾವತಿ ಹಾಗೂ ಇಬ್ಬರು ಮಕ್ಕಳು ಸುಳ್ಯದಿಂದ ಮಂಡೆಕೋಲು ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪಡೀಲ್ ಎಂಬಲ್ಲಿ ಸವಾರನ ನಿಯಂತ್ರಣ ತಪ್ಪಿ ಪಾದಚಾರಿಗೆ ಬೈಕ್ ಗುದ್ದಿದ್ದು, ಬೈಕ್ ನಲ್ಲಿದ್ದ ನಾಲ್ವರೂ ಕೂಡಾ ರಸ್ತೆಗೆಸೆಯಲ್ಪಟ್ಟಿದ್ದಾರೆ ಎನ್ನಲಾಗಿದೆ.

Also Read  ಟೈರ್ ಸ್ಫೋಟಗೊಂಡು ಕಾರು ಅಪಘಾತ - ಮಾಜಿ ಶಾಸಕಿ ನೀರಜಾ ರೆಡ್ಡಿ ಮೃತ್ಯು..!

 

error: Content is protected !!
Scroll to Top