ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ ನಲ್ಲಿ ಅವಹೇಳನಕಾರಿ ಪೋಸ್ಟ್ ➤ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಮೇ.29. ನೂತನ ಸಭಾಧ್ಯಕ್ಷರಾದ ಉಳ್ಳಾಲ ಕ್ಷೇತ್ರದ ಶಾಸಕ ಯು.ಟಿ ಖಾದರ್ ವಿರುದ್ದ ಫೇಸ್​ಬುಕ್​ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿರುವ ಶ್ರೀರಾಮಸೇನೆ ಮುಖಂಡನ ವಿರುದ್ಧ ಕೇಸ್ ದಾಖಲಾಗಿದೆ.

ಪ್ರೀತೇಶ್ ಚಿಕ್ಕಮಗಳೂರು ಎಂಬಾತ ಖಾದರ್ ವಿರುದ್ಧ ಪೋಸ್ಟ್ ಮಾಡಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆ ಕಾಂಗ್ರೆಸ್​​ ಕಾರ್ಯಕರ್ತರು ಚಿಕ್ಕಮಗಳೂರು ನಗರದ ಸೆನ್ ಠಾಣೆಯಲ್ಲಿ ಪ್ರೀತೇಶ್ ವಿರುದ್ದ ದೂರು ಸಲ್ಲಿಸಿದ್ದಾರೆ. ಈ ಕೂಡಲೇ ಇತನ ವಿರುದ್ದ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

 

error: Content is protected !!

Join the Group

Join WhatsApp Group