ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು.!

(ನ್ಯೂಸ್ ಕಡಬ)newskadaba.comಚಿಕ್ಕಮಗಳೂರು,ಮೇ.29 ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ನಡೆದಿದೆ.

ಸಹೋದರರ ಮಕ್ಕಳಾಗಿರುವ ಯಶವಂತ(10), ರೋಹಿತ್(6) ಮೃತಪಟ್ಟವರು.ಸಮೀಪದ ಕೆರೆ ಬಳಿ ಹೋಗಿದ್ದ ಬಾಲಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮಕ್ಕಳ ಮೃತದೇಹ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

 

error: Content is protected !!

Join the Group

Join WhatsApp Group