ಈಜಲು ತೆರಳಿದ್ದ ಉಪನ್ಯಾಸಕ ಸೇರಿ ಇಬ್ಬರು ನೀರುಪಾಲು

(ನ್ಯೂಸ್ ಕಡಬ)newskadaba.com ಕುಂದಾಪುರ, ಮೇ.30. ಕಂದಾವರ ಗ್ರಾಮದ ಉಳ್ಳೂರು – ಕಾಡಿನಕೊಂಡ ಎಂಬಲ್ಲಿ ಕಂದಾವರ ಡಂಪಿಂಗ್ ಯಾರ್ಡ್‌ ಹತ್ತಿರದ ಮದಗಗಕ್ಕೆ ಈಜಲು ತೆರಳಿದ್ದ ಶಂಕರನಾರಾಯಣ ಮದರ್ ಥೇರಸಾ ಕಾಲೇಜಿನ ಉಪನ್ಯಾಸಕ ಸೇರಿ ಇಬ್ಬರು ನೀರು ಪಾಲಾಗಿದ್ದಾರೆ ಎಂದು ವರದಿ ತಿಳಿಸಿದೆ.


ಉಪನ್ಯಾಸಕ ರಾಜೇಂದ್ರ ಶೆಟ್ಟಿಗಾರ (28) ಶಂಕರನಾರಾಯಣ ಹೈಸ್ಕೂಲ್ ವಿದ್ಯಾರ್ಥಿ ಭರತ್ ಶೆಟ್ಟಿಗಾರ (15) ನೀರಲ್ಲಿ ಮುಳುಗಿ ಮೃತರಾಗಿದ್ದಾರೆ ಎನ್ನಲಾಗಿದೆ.

Scroll to Top