ಮಿತ್ತಬೈಲು: ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

(ನ್ಯೂಸ್ ಕಡಬ) newskadaba.com ಕಡಬ, ಜ.19. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯೊಂದು ಬೆಂಕಿಗಾಹುತಿಯಾದ ಘಟನೆ ಕೊಂಬಾರು ಗ್ರಾಮದ ಮಿತ್ತಬೈಲು‌ ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ದಲಿತ ಮುಖಂಡ ದಯಾನಂದ ಮಿತ್ತಬೈಲು ಎಂಬವರ ಮನೆ ಗುರುವಾರ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿಗಾಹುತಿಯಾಗಿದ್ದು, ಮನೆಯೊಳಗಿದ್ದ ಸೊತ್ತುಗಳು ಸುಟ್ಟು ಕರಕಲಾಗಿವೆ. ಕೊಂಬಾರು ಪರಿಸರದಲ್ಲಿ ಕಾಡಾನೆ ಹಾವಳಿ ಇರುವುದರಿಂದ ದಯಾನಂದ ಹಾಗೂ ಪತ್ನಿ ರಾತ್ರಿ ಮಲಗಲು ಬೇರೆಡೆಗೆ ಹೋಗಿದ್ದು, ಶುಕ್ರವಾರದಂದು ಮನೆಗೆ ಬಂದಾಗ ವಿಷಯ ತಿಳಿದಿದೆ. ಸ್ಥಳಕ್ಕೆ ಕಡಬ ಠಾಣಾಧಿಕಾರಿ‌ ಪ್ರಕಾಶ್ ದೇವಾಡಿಗ, ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ನೆಲ್ಯಾಡಿ: ಮದುವೆಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಮಿನಿಬಸ್ ಪಲ್ಟಿ ➤ ನಾಲ್ವರು ಗಂಭೀರ, ಹತ್ತಕ್ಕೂ ಅಧಿಕ ಮಂದಿಗೆ ಗಾಯ

error: Content is protected !!
Scroll to Top