ಕಡಬಕ್ಕೆ ಭೇಟಿ ನೀಡಿದ ಸುಳ್ಯದ ನೂತನ ಶಾಸಕಿ ಭಾಗೀರಥಿ ಮುರುಳ್ಯ➤ ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಕಡಬ, ಜೂ.04. ಸುಳ್ಯ ವಿಧಾನಸಭಾ ಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯ ಅವರನ್ನು ಕಡಬ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಅಭಿನಂದಿಸಲಾಯಿತು.

ಶಾಸಕಿಯಾದ ಬಳಿಕ ಇದೇ ಮೊದಲ‌ ಬಾರಿಗೆ ಕಡಬಕ್ಕೆ ಆಗಮಿಸಿದ ಅವರಿಗೆ ಹೂಗುಚ್ಛ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾಗರಾಜ್ ಎನ್.ಕೆ., ಸ್ಥಾಪಕಾಧ್ಯಕ್ಷರಾದ ಬಾಲಕೃಷ್ಣ ಕೊಯಿಲ, ಕಾರ್ಯದರ್ಶಿ ವಿಜಯ ಕುಮಾರ್, ಸದಸ್ಯರಾದ ಪ್ರವೀಣ್ ರಾಜ್ ಕೊಯಿಲ, ಪ್ರಕಾಶ್ ಕೋಡಿಂಬಾಳ ಹಾಗೂ ದಿವಾಕರ ಎಂ. ಉಪಸ್ಥಿತರಿದ್ದರು.

Also Read  ರಾಜ್ಯಮಟ್ಟದ ಚಿತ್ರಕಲಾ ಗ್ರೇಡ್ ಪರೀಕ್ಷೆಯಲ್ಲಿ ನಿಹಾರಿಕಾ ಹಾಗೂ ಶಿವಾನಿ ಡಿ.ಎ. ಕಡಬ ತಾಲೂಕಿಗೆ ಪ್ರಥಮ - ಸೈಂಟ್ ಜೋಕಿಮ್ಸ್ ಮತ್ತು ಸೈಂಟ್ ಆ್ಯನ್ಸ್ ಗೆ 100% ಫಲಿತಾಂಶ

error: Content is protected !!
Scroll to Top