ಸಿಎಂ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಫುರ್ಟಾಡೊ ನೇಮಕ

(ನ್ಯೂಸ್ ಕಡಬ) newskadaba.com ಮಡಂತ್ಯಾರು, ಜೂ. 08. ಬೆಳ್ತಂಗಡಿ ತಾಲೂಕಿನ ಮಡಂತ್ಯಾರ್ ಮೂಲದ ಅರುಣ್ ಫುರ್ಟಾಡೊ ಎಂಬವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉಪ ಕಾರ್ಯದರ್ಶಿಯಾಗಿ ನಿಯೋಜಿಸಲಾಗಿದೆ.

ಈ ಕುರಿತು ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವಿ ಅಶೋಕರವರು ಆದೇಶ ಹೊರಡಿಸಿದ್ದು, “ಪ್ರಸ್ತುತ ಬೆಂಗಳೂರಿನ ಡಾ ಬಾಬು ಜಗಜೀವನರಾಮ್ ಸಂಶೋಧನಾ ಕೇಂದ್ರದ ನಿರ್ದೇಶಕರಾಗಿರುವ ಅರುಣ್ ಫುರ್ಟಾಡೊ ಅವರನ್ನು ಮುಖ್ಯಮಂತ್ರಿಯವರ ಅಧಿಕಾರಾವಧಿ ಅಥವಾ ಮುಂದಿನ ಆದೇಶದವರೆಗೆ ಮುಖ್ಯಮಂತ್ರಿಗಳ ಉಪ ಕಾರ್ಯದರ್ಶಿಯಾಗಿ (ಆಡಳಿತ) ನಿಯೋಜನೆ ಮಾಡಿ ತಕ್ಷಣವೇ ಜಾರಿಗೆ ಬರುವಂತೆ ನೇಮಿಸಿ ಆದೇಶಿಸಿದೆ.

Also Read  ಶಾಂತಿನಗರ ಸರ್ಕಾರಿ ಶಾಲೆಯಲ್ಲಿ ತುಳುನಾಡ ಆಚರಣೆ; ಕೊರಳ ಪರ್ಬ, ಹೊಸ ಅಕ್ಕಿ ಊಟ ಆಚರಣೆ

error: Content is protected !!
Scroll to Top