ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

Also Read  ➤2023 ಬಜೆಟ್ ಗೂ ಮುನ್ನವೇ ಕಾರುಗಳ ಬೆಲೆ ಹೆಚ್ಚಳ

error: Content is protected !!
Scroll to Top